96 total views
ಮೈಸೂರು ಇನ್ನು ಮುಂದೆ ಮನೆ ಬಾಡಿಗೆಗೆ ಪಡೆಯುವುದು ಸುಲಭವಿಲ್ಲ. ನಗರದಲ್ಲಿ ಮನೆ ಬಾಡಿಗೆ ಪಡೆಯುವ ವಿಚಾರವಾಗಿ ಮೈಸೂರು ಪೊಲೀಸರು ಶೀಘ್ರದಲ್ಲೇ ಮಾರ್ಗಸೂಚಿ ಹೊರಡಿಸಲಿದ್ದಾರೆ.ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ, ಶಂಕಿತ ಉಗ್ರ ಶಾರಿಕ್ ಮೈಸೂರಿನ ಲೋಕನಾಯಕ ಬಡಾವಣೆಯಲ್ಲಿ ವಾಸವಿದ್ದ ಎಂಬ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಮಾಹಿತಿ ತಿಳಿದುಬಂದಿದೆ.ಶಂಕಿತ ಉಗ್ರ ಶಾರಿಕ್ ನಕಲಿ ದಾಖಲೆ ನೀಡಿ ಮನೆ ಬಾಡಿಗೆಗೆ ಪಡೆದಿದ್ದ. ಮನೆ ಬಾಡಿಗೆ ನೀಡುವ ಮುನ್ನ ವ್ಯಕ್ತಿಯ ಪೂರ್ವಾಪರ ತಿಳಿಯಬೇಕು. ಬಾಡಿಗೆದಾರರು ನೀಡುವ ದಾಖಲೆ ಸಂಪೂರ್ಣ ಪರಿಶೀಲಿಸಬೇಕು. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೂ ಮಾಹಿತಿ ನೀಡಬೇಕು. ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲೆ ಸಂಗ್ರಹಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ರಮೇಶ್ ಬಾನೋತ್ ಹೇಳಿದ್ದಾರೆ.
ಮೈಸೂರಿನಲ್ಲಿ ತಲೆ ಮರೆಸಿಕೊಂಡಿದ್ದ ಶಂಕಿತ ಉಗ್ರ ಶಾರಿಕ್ ನಕಲಿ ದಾಖಲೆ ನೀಡಿ ಮನೆ ಪಡೆದಿದ್ದ. ಹೀಗಾಗಿ ನಗರದಲ್ಲಿ ಬಾಡಿಗೆಗಾಗಿ ಮನೆ ಕೇಳಿಕೊಂಡು ಬಂದಾಗ ಅಂತಹ ವ್ಯಕ್ತಿಗಳ ಪೂರ್ವಾಪರ ತಿಳಿದುಕೊಳ್ಳಬೇಕು ಎಂದಿದ್ದಾರೆ.
ಶಂಕಿತ ಉಗ್ರ ಶಾರೀಕ್ ನೆಲೆಸಿದ್ದ ಮೈಸೂರಿನ ಲೋಕನಾಯಕನಗರ ಬಡಾವಣೆಯ ರಸ್ತೆಯಲ್ಲಿ ಎಲ್ಲ ಮನೆಗಳುಖಾಲಿಯಾಗಿವೆ. ಬಹುತೇಕ ಮನೆಗಳಲ್ಲಿ ಜನರು ಹೆದರಿಕೆಯಿಂದ ಮನೆ ತೊರೆದು ಬೇರೆಡೆಗೆ ಹೋಗಿದ್ದಾರೆ. ಇರುವವರೂ ಶಾರೀಕ್ ಬಗ್ಗೆ ಯಾವುದೇ ಮಾಹಿತಿ ಕೊಡಲು ಹಿಂಜರಿಯುತ್ತಿದ್ದಾರೆ