2,582 total views
ಗೋಕರ್ಣದ ಸಂಯುಕ್ತ ಪದವಿಪೂರ್ವ ಕಾಲೇಜಿನ ಸುಧಾ ನಾರಾಯಣ ಪೈ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕುಮಟಾ ತಾಲೂಕಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ 2023-24ನೇ ಸಾಲಿನ ಇಲಾಖಾ ಕ್ರೀಡಾಕೂಟವನ್ನು ಶಾಸಕರಿಂದ ಉದ್ಘಾಟನೆ
ಉತ್ತರಕನ್ನಡ : ಗೋಕರ್ಣದ ಸಂಯುಕ್ತ ಪದವಿಪೂರ್ವ ಕಾಲೇಜಿನ ಸುಧಾ ನಾರಾಯಣ ಪೈ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕುಮಟಾ ತಾಲೂಕಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ 2023-24ನೇ ಸಾಲಿನ ಇಲಾಖಾ ಕ್ರೀಡಾಕೂಟವನ್ನು ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾದ ದಿನಕರ ಶೆಟ್ಟಿಯವರು ಉದ್ಘಾಟನೆ ಮಾಡಿದರು. ಕರ್ನಾಟಕ ಸರ್ಕಾರ, ಜಿ. ಪಂ. ಉತ್ತರಕನ್ನಡ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕುಮಟಾ ಹಾಗೂ ಬೆಲೆಗದ್ದೆ ಸರ್ಕಾರಿ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ಈ ಕ್ರೀಡಾಕೂಟವು ನೆರವೇರಿತು.
ಗೋಕರ್ಣ ಗ್ರಾಮಪಂಚಾಯತ್ ಅಧ್ಯಕ್ಷೆ ಸುಮನಾ ಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ನಾಕ್ತಾಲ ದಿನ್ನೆ ರೆಬೆಲ್ಲೋ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಾಯಿ ಗಾಂವಕರ, ಬೆಳಕು ಸಂಸ್ಥೆ ಅಧ್ಯಕ್ಷ ನಾಗರಾಜ ನಾಯಕ, ಆಶ್ರಯ ಫೌಂಡೇಶನ್ ಅಧ್ಯಕ್ಷ ರಾಜೀವ ಗಾಂವಕರ, ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಂದ್ರ ಎಲ್. ಭಟ್, ತಾ. ಪಂ. ಮಾಜಿ ಸದಸ್ಯ ಮಹೇಶ ಶೆಟ್ಟಿ, ಭದ್ರಕಾಳಿ ಕಾಲೇಜು ಪ್ರಾಂಶುಪಾಲ ಎಸ್. ಸಿ. ನಾಯಕ, ಭದ್ರಕಾಳಿ ಪ್ರೌಢಶಾಲೆ ಮುಖ್ಯಾಧ್ಯಾಪಕ ಸಿ. ಜಿ. ನಾಯಕ ಉಪಸ್ಥಿತರಿದ್ದರು